ಅರಣ್ಯ ಇಲಾಖೆಯ ಕರ್ನಾಟಕ ಅರಣ್ಯ ಸುಸ್ಥಿರ ಅರಣ್ಯ ನಿರ್ವಹಣೆ ಮತ್ತು ಜೀವ ವೈವಿಧ್ಯ ಸಂರಕ್ಷಣಾ ಯೋಜನೆಯಲ್ಲಿ ಸ್ಥಾಪಿಸಲಾದ ವೀರಕಂಭ ಗ್ರಾಮ ಅರಣ್ಯ ಸಮಿತಿಯ ಹೊಸ ನಿರ್ವಹಣಾ ಸಮಿತಿ ರಚನೆಯಾಗಿದ್ದು ಮುಂದಿನ ಐದು ವರ್ಷಗಳ ಕಾಲಕ್ಕೆ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ವಿಶ್ವನಾಥ ಎಂ. ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಎಂ.ಆರ್.ನೋಣಯ್ಯ, ರೇವತಿ, ಅಬ್ದುಲ್ ಖಾದರ್, ಮೀನಾಕ್ಷಿ, ಸಂತೋಷ್ ಕಲ್ಮಲೆ, ಬೇಬಿ ಜೆ.ಆಳ್ವ, ಚಂದ್ರಶೇಖರ ಬಂಗೇರ, ಜಯಪ್ರಸಾದ್ ಶೆಟ್ಟಿ, ಗಿರಿಜ, ತೇಜಾಕ್ಷಿ ಅವರನ್ನು ಆಯ್ಕೆ ಮಾಡಲಾಯಿತು. ವಿಟ್ಲ ಕಂದಾಯ ನಿರೀಕ್ಷಕ ಎಂ.ಎನ್.ರವಿ ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದರು. ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ರವಿರಾಜ್ ಬಿ. ಗಸ್ತು ಅರಣ್ಯ ಪಾಲಕರಾದ ಶೋಭಿತ್ ಕುಮಾರ್, ದಯಾನಂದ, ರಾಘವೇಂದ್ರ, ಅರಣ್ಯ ವೀಕ್ಷಕರಾದ ಕಿರಣ್, ಪ್ರವೀಣ್ ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…