
ನೀರಪಾದೆ ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆಗಳಿಗೆ ಪ್ರೇರಣೆ ನೀಡಿದ ಕೇಂದ್ರವಾಗಿದೆ, ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಹಿಂದೂ ಸಮಾಜ ಜಾಗೃತವಾಗಬೇಕು,ಈ ನಿಟ್ಟಿನಲ್ಲಿ ನಿರ್ಮಾಣವಾದ ಮಂದಿರ ದೇಶವನ್ನು ಸಮಾಜವನ್ನು ಉಳಿಸುವ ಮಹತ್ಕಾರ್ಯ ಮಾಡಲಿ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರಪಾದೆ ಎಂಬಲ್ಲಿ ಮೇ.8 ರಿಂದ ಮೇ.10 ರವರೆಗೆ ನಡೆಯಲಿರುವ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಲೋಕಾರ್ಪಣೆ ಹಾಗೂ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪ್ರತಿಷ್ಠಾ ಸಾನಿಧ್ಯ ಕಳಶಾಭಿಷೇಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ನೀರಪಾದೆ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಧಾರ್ಮಿಕ ಚಿಂತನೆಗಳನ್ನು ಬೆಳೆಸುವ ಕೇಂದ್ರವಾಗಲಿ ಎಂದು ಆಶಿಸಿದ ಅವರು. ಸಾಮಾನ್ಯ ಜನರು ದಾರಿ ತಪ್ಪುವ ಅ ಕಾಲಘಟ್ಟದಲ್ಲಿ ಮತಾಂತರಕ್ಕೆ ಆಸ್ಪದ ನೀಡದೆ, ಜನರಿಗೆ ಧೈರ್ಯ ಮತ್ತು ವಿಶ್ವಾಸ ಮೂಡಿಸಿ ಹಿಂದೂ ಸಮಾಜವನ್ನು ಜಾಗೃತಗೊಳಿಸಿರುವ ಕೆಲಸವನ್ನು ನಾರಾಯಣ ಗುರುಗಳು ಮಾಡಿದ್ದಾರೆ ಎಂದು ಅವರು ಹೇಳಿದರು.
ಬ್ರಹ್ಮಶ್ರೀ ನಾರಾಯಣ ಗುರು ಇದರ ಸೇವಾ ಟ್ರಸ್ಟ್ (ರಿ.) ಗೌರವಾಧ್ಯಕ್ಷ ಎ.ರುಕ್ಮಯ ಪೂಜಾರಿ ಮಾತನಾಡಿ, ನೀರಪಾದೆ ಪರಿಸರದ ಜನರಲ್ಲಿ ಸಂಸ್ಕಾರವಿದೆ ಎಂಬುದಕ್ಕೆ ಅನೇಕ ಸಂದರ್ಭಗಳು ಸಾಕ್ಷಿಯಾಗಿವೆ. ಮಂದಿರ ಲೋಕಾಪರ್ಣೆಗೆ ಸಿದ್ದವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋದರೆ ಸಾರ್ಥಕತೆ ಪ್ರಾಪ್ತಿಯಾಗುತ್ತದೆ, ಹಿರಿಯರ ಕನಸು ನನಸಾಗುತ್ತದೆ ಎಂದು ಹೇಳಿದರು.
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ ಅಧ್ಯಕ್ಷ ನಿಡ್ಯೆ ನಾರಾಯಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿ ಹಾಗೂ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಯರಾಮ ಕಲ್ಲಾಪು, ಮಹಿಳಾ ಸಮಿತಿ ಅಧ್ಯಕ್ಷೆ ಮಲ್ಲಿಕಾ ಸೇಣೆರೆಕೋಡಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಚಂದ್ರಶೇಖರ ಚೆಂಡೆ, ಗ್ರಾ.ಪಂ.ಮಾಜಿ ಸದಸ್ಯ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಶಿವರಾಜ್ ಕಾಂದಿಲ, ರಾಧಾಕೃಷ್ಣ ಅಡ್ಯಂತಾಯ, ಮಹಿಳಾ ಸಮಿತಿ ಗೌರವ ಅಧ್ಯಕ್ಷೆ ಮೀನಾಕ್ಷಿ,ಯಶೋಧ ನಿಡ್ಯೆ, ಶಶಿಕಲಾ, ಮುಖ್ಯೋಪಾಧ್ಯಾಯಿನಿ ಜಯಶ್ರೀ ಯಸ್.ಔದಿ, ಶಿಕ್ಷಕರಾದ ಉದಯ ಕುಮಾರ್, ಸಂತೋಷ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟ್ರಸ್ಟ್ ಕಾರ್ಯದರ್ಶಿ ಮೋಹನ್ ಪಿ.ಎಸ್.ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಿತಿ ಉಪಾಧ್ಯಕ್ಷ ಶರತ್ ಕುಮಾರ್ ಸೇಣೆರೆಕೋಡಿ ಸ್ವಾಗತಿಸಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಕಾಂದಿಲ ವಂದಿಸಿದರು. ಅಶೋಕ್ ಗಣೇಶ್ ನಗರ ಹಾಗೂ ಜಗದೀಶ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.


Be the first to comment on "ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ ಮೈಗೂಡಿಸಿ ಸಮಾಜ ಜಾಗೃತವಾಗಲಿ: ಡಾ. ಭಟ್"