ಬಂಟ್ವಾಳ: ಬಂಟ್ವಾಳ ಪುರಸಭಾ ಮಾಜಿ ಉಪಾಧ್ಯಕ್ಷ, ನಿಕಟಪೂರ್ವ ಸದಸ್ಯ ಮಹಮ್ಮದ್ ನಂದರಬೆಟ್ಟು (66) ಅಲ್ಪಕಾಲದ ಅಸೌಖ್ಯದ ಬಳಿಕ ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅವರು ಹೊಂದಿದ್ದರು. ಬಂಟ್ವಾಳ ಪುರಸಭೆಗೆ ಮೂರು ಅವಧಿಗೆ ಸದಸ್ಯರಾಗಿ ಚುನಾಯಿತರಾಗಿದ್ದ ಅವರು, ಒಂದು ಬಾರಿ ಉಪಾಧ್ಯಕ್ಷರಾಗಿದ್ದರು. ನಂದರಬೆಟ್ಟು ಅನ್ಸಾರಿಯಾ ಇಸ್ಲಾಮಿಕ್ ಮದರಸ ಸ್ಥಾಪಕ ಅಧ್ಯಕ್ಷರಾಗಿದ್ದ ಅವರು ನಿರಂತರ 16 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸ್ಥಳೀಯವಾಗಿ ಹಲವು ಧಾರ್ಮಿಕ, ಸಾಮಾಜಿಕ, ರಾಜಕೀಯ ಸಂಘಟನೆಗಳಲ್ಲೂ ಅವರು ಸಕ್ರಿಯರಾಗಿದ್ದರು. ಕಾಲೇಜು ಹಂತದಲ್ಲಿ ಉತ್ತಮ ವಾಲಿಬಾಲ್ ಪಟುವೂ ಆಗಿದ್ದ ಅವರು, ರಾಷ್ಟ್ರೀಯ ಮಟ್ಟದ ಆಟಗಾರರಾಗಿ ಗುರುತಿಸಿಕೊಂಡಿದ್ದರು. ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ, ಎಸ್.ಡಿ.ಪಿ.ಐ. ಮುಖಂಡ, ಪುರಸಭೆ ಮಾಜಿ ಉಪಾಧ್ಯಕ್ಷ ಮುನೀಶ್ ಆಲಿ ಸಹಿತ ಗಣ್ಯರು ಮಹಮ್ಮದ್ ನಂದರಬೆಟ್ಟು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಅಮೀಬಾ ಸೋಂಕಿನಿಂದ ಸಾವು ಸಂಭವಿಸಿಲ್ಲ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ (more…)