ಬಂಟ್ವಾಳ: ಇರವಿನ ಅರಿವು ಆತ್ಮ ಸಾಕ್ಷಾತ್ಕಾರಕ್ಕೆ ದಾರಿ ಎಂಬುದಾಗಿ ನಿವೃತ್ತ ಪ್ರಾಧ್ಯಾಪಕ ಶ್ರೀ ರಾಜಮಣಿ ರಾಮಕುಂಜ ಅವರು ಹೇಳಿದರು. ಅವರು ಕೈಕಂಬದ ಶಮ್ಯಾಪ್ರಾಸದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂಕರ ತತ್ವ ಪ್ರಚಾರ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ಅಭಿಯಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಆತ್ಮ ವಿಕಸನ ಮಾಡಿಕೊಳ್ಳುವುದರ ಮೂಲಕ ನಾವೂ ಬ್ರಹ್ಮರಾಗಬಹುದು ಎಂದು ಹೇಳಿದರು.
ಪ್ರಾಂಶುಪಾಲೆ ರಮಾ ಎಸ್.ಭಂಡಾರಿ ಸಾಂದರ್ಭಿಕವಾಗಿ ಮಾತನಾಡಿದರು. ಜಗದೀಶ್ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು. ಅಭಿಯಾನದ ಬಂಟ್ವಾಳ ತಾಲೂಕು ಸಮಿತಿ ಸಂಚಾಲಕ ಅನಾರು ಕೃಷ್ಣ ಶರ್ಮ ವಂದಿಸಿದರು. ಆರ್ಟ್ ಆಫ್ ಲಿವಿಂಗ್ ಸಮಿತಿಯ ವತಿಯಿಂದ ನಡೆದ ಭಜನಾ ಕಾರ್ಯಕ್ರಮದ ಮೂಲಕ ಕಾರ್ಯಕ್ರಮಕ್ಕೆ ಮಂಗಳ ಹಾಡಲಾಯಿತು.