ಬಂಟ್ವಾಳ

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲು ಓಡಾಟಕ್ಕೆ ಶೀಘ್ರದಲ್ಲಿ ಚಾಲನೆ ಕರಾವಳಿ ಜನರಲ್ಲಿ ಸಂತಸ: ಪ್ರಭಾಕರ ಪ್ರಭು

ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರೊಂದಿಗೆ ಮಾತುಕತೆ ಮಾಡುವ ಮೂಲಕ ಮಂಗಳೂರು ಬೆಂಗಳೂರು ಓಡಾಟದ ಮನವರಿಕೆ ಮಾಡಿಸುವುದರ ಹಿನ್ನೆಲೆಯಲ್ಲಿ  ಮಂಗಳೂರು ನಿಂದ ಬೆಂಗಳೂರುಗೆ  ವಂದೇ ಭಾರತ್ ರೈಲು ಓಡಾಟ ಮಾಡುವ ಪೂರ್ವಭಾವಿಯಾಗಿ ಮಂಗಳೂರುನಿಂದ ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಪರೀಕ್ಷಾರ್ಥಿ ಸಂಚಾರ (ಟ್ರಯಲ್ )ಈಗಾಗಲೇ ಆರಂಭವಾಗಿರುತ್ತದೆ. ಅತೀ ಶೀಘ್ರದಲ್ಲಿ ಈ ಸೇವೆಯು ಕರಾವಳಿ ಭಾಗದ ಸಾವಿರಾರು ಜನರಿಗೆ ಲಭಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವರು ಇತ್ತೀಚಿಗೆ ತಿಳಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವರು ಬೆಂಗಳೂರು ನಿಂದ ಮುಂಬೈ ನಡುವಿನ ಎಕ್ಸ್ ಪ್ರೆಸ್ ರೈಲಿಗೆ ವರ್ಚುವಲ್ ವೇದಿಕೆ ಮೂಲಕ ಹಸಿರು ನಿಶಾನೆ ತೋರಿಸಿ ಮಂಗಳೂರು ಬೆಂಗಳೂರು ಮಾರ್ಗ ನಡುವೆಯೂ ವಂದೇ ಭಾರತ್ ರೈಲು ಸಂಚಾರ ಶೀಘ್ರದಲ್ಲಿ ಪ್ರಾರಂಭ ಗೊಳ್ಳುವುದು ಎಂದೂ ತಿಳಿಸಿದ್ದಾರೆ.

ಈ ರೈಲು ಸಂಚಾರದಿಂದಾಗಿ ಕರಾವಳಿಯ ಮಂಗಳೂರಲ್ಲಿ ವ್ಯಾಪಾರ, ಪ್ರವಾಸದ್ಯೋಮ ಮತ್ತು ದೈನಂದಿನ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

ಕಳೆದ ಕೇಲವು ಸಮಯದಲ್ಲಿ ನಿರಂತರವಾಗಿ ಕೇಂದ್ರ ರೈಲ್ವೆ ಸಚಿವರೊಂದಿಗೆ ಸಂಪರ್ಕ ಮಾಡಿ ಕರಾವಳಿ ಭಾಗದ ಜನರಿಗೆ ರೈಲ್ವೆ ಸೌಕರ್ಯ ಒದಗಿಸಿ ಕೊಟ್ಟ  ದಕ್ಷಿಣ ಕನ್ನಡ ಸಂಸದ ಚೌಟರ ಬಗ್ಗೆ  ಜನಸಾಮಾನ್ಯರಲ್ಲಿ ವ್ಯಾಪಕ ಅಭಿಮಾನ ಮೂಡಿಬರುತ್ತಿದೆ. ಈ ನಿಟ್ಟಿನಲ್ಲಿ  ಸಾರ್ವಜನಿಕರ ಪರವಾಗಿ ಬಂಟ್ವಾಳ ತಾಲೂಕು  ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಪ್ರಭಾಕರ ಪ್ರಭು ಸಂತಸ ವ್ಯಕ್ತಪಡಿಸಿ ಧನ್ಯವಾದ ನೀಡಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.