ಕಲ್ಲಡ್ಕ

SDPI ಕಲ್ಲಡ್ಕ ಬ್ಲಾಕ್ ಪ್ರತಿನಿಧಿ ಸಭೆ: ಬೂತ್ ಮಟ್ಟದ ಸಂಘಟನೆಗೆ ಬಲವರ್ಧನೆಗೆ ಕರೆ

ಎಸ್.ಡಿ.ಪಿ.ಐ.ನ ಕಲ್ಲಡ್ಕ ಬ್ಲಾಕ್ ಸಮಿತಿಯ ಪ್ರತಿನಿಧಿ ಸಭೆ ಪಾಣೆಮಂಗಳೂರು ಎಸ್‌ಎಸ್ ಆಡಿಟೋರಿಯಂನಲ್ಲಿ ಬ್ಲಾಕ್ ಅಧ್ಯಕ್ಷರಾದ ಸತ್ತರ್ ಕಲ್ಲಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಶಾಹುಲ್ ಎಸ್.ಎಚ್. ಮಾತನಾಡಿ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟಿತವಾಗಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಅಗತ್ಯವನ್ನು ಒತ್ತಿಹೇಳಿದರು.

ನಾಯಕರ ಮೇಲೆ ಮಹತ್ವರವಾದ ಜವಾಬ್ದಾರಿಯಿದ್ದು ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಹಾಗೂ ಬ್ಲಾಕ್ ವ್ಯಾಪ್ತಿಯಲ್ಲಿ ಪಕ್ಷದ ವಿಸ್ತರಣೆಗೆ ಮತ್ತಷ್ಟು ಒತ್ತು ನೀಡಬೇಕೂ, ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗೆ ತಳಮಟ್ಟದಿಂದಲೇ ಸಜ್ಜಾಗಬೇಕೆಂದು  ಬೂತ್ ಮಟ್ಟದಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಅವರ ಪರವಾಗಿ ಧ್ವನಿಯಾಗಬೇಕು. ಜೊತೆಗೆ ಪಕ್ಷ ಸೇರ್ಪಡೆ ಅಭಿಯಾನಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವ ಅಗತ್ಯವಿದೆ. ಜನಪರ ಹಿತಾಸಕ್ತಿಯನ್ನು ಕೇಂದ್ರಬಿಂದುವಾಗಿರಿಸಿಕೊಂಡು ಸಂಘಟಿತ ಹೋರಾಟಗಳನ್ನು ರೂಪಿಸುವ ಮೂಲಕ ಜನವಿರೋಧಿ ನೀತಿಗಳಿಗೆ ಪರಿಣಾಮಕಾರಿ ಪ್ರತಿರೋಧ ನೀಡಬೇಕು ಎಂದು ಅವರು ಹೇಳಿದರು.  ಇದಲ್ಲದೆ, ಎಸ್‌ಐಆರ್ (SIR) ಕುರಿತು ಸಮಗ್ರ ಮಾಹಿತಿ ಜನಸಾಮಾನ್ಯರಿಗೆ ತಲುಪಿಸುವ ಜವಾಬ್ದಾರಿಯನ್ನು ಪ್ರತಿಯೊಂದು ಕಾರ್ಯಕರ್ತರು ವಹಿಸಿಕೊಳ್ಳಬೇಕು ಈಗ ನಡೆಯುತ್ತಿರುವ ಮ್ಯಾಪಿಂಗ್ ಪ್ರಕ್ರಿಯೆಯ ಕುರಿತು ಮನೆಮನೆಗೆ ತೆರಳಿ ಸ್ಪಷ್ಟ ಮಾಹಿತಿ ನೀಡುವ ಮೂಲಕ ಯಾವುದೇ ಗೊಂದಲ ಉಂಟಾಗದಂತೆ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು.

ಜಾಹೀರಾತು

ಸಭೆಯಲ್ಲಿ ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಬ್ಲಾಕ್ ಸಮಿತಿ ಕೈಗೊಂಡ ಜನಪರ ಹೋರಾಟಗಳು, ಸಂಘಟನಾ ಚಟುವಟಿಕೆಗಳು ಹಾಗೂ ವಿವಿಧ ಕಾರ್ಯಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಜೊತೆಗೆ ಮುಂದಿನ ಕಾರ್ಯಕ್ರಮಗಳ ರೂಪುರೇಷೆ, ಪಕ್ಷದ ಬಲವರ್ಧನೆ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದಿನ ಕಾರ್ಯತಂತ್ರಗಳನ್ನು ರೂಪಿಸಲಾಯಿತು. ಸಭೆಯಲ್ಲಿ ಬ್ಲಾಕ್ ಹಾಗೂ ಗ್ರಾಮ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿ ತಮ್ಮ ಅಭಿಪ್ರಾಯಗಳು, ಸಲಹೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳನ್ನು ಹಂಚಿಕೊಂಡರು. ಸಭೆಯಲ್ಲಿ ಮಧ್ಯಂತರ ವರಧಿಯನ್ನು ಬ್ಲಾಕ್ ಸಮಿತಿ ಕಾರ್ಯದರ್ಶಿಗಳಾದ ಅನ್ವರ್ ಆಲಡ್ಕ ವಾಚಿಸಿದರು, ಮುಖ್ಯ ಅತಿಥಿಗಳಾಗಿ ಬಂಟ್ವಳ ಕ್ಷೇತ್ರ ಸಮಿತಿ ಕಾರ್ಯದರ್ಶಿಗಳಾದ ಅಕ್ಬರ್ ಅಲೀ, ಕೋಶಾಧಿಕಾರಿಗಳಾದ ಯಾಸೀರ್ ಕಲ್ಲಡ್ಕ, ಸಮಿತಿ ಸದಸ್ಯರಾದ ಬಶೀರ್ ಬೊಳ್ಳಾಯಿ ಆಗಮಿಸಿದ್ದರು. ವೇದಿಕೆಯಲ್ಲಿ ಬ್ಲಾಕ್ ಸಮಿತಿ ಉಪಾಧ್ಯಕ್ಷರಾದ ಕಾದರ್ ಪಿ.ಜೆ, ಬ್ಲಾಕ್ ಸಮಿತಿ ಕೋಶಾಧಿಕಾರಿಗಳಾದ ಇಕ್ಬಾಲ್ ಕೆ.ಸಿ ರೋಡ್ ಉಪಸ್ಥಿತರಿದ್ದರು. ಬ್ಲಾಕ್ ಜೊತೆ ಕಾರ್ಯದರ್ಶಿಗಳಾದ ಇಬ್ರಾಹಿಂ ಸಮದ್ ಸ್ವಾಗತಿಸಿ, ಮನ್ಸೂರ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.