ಬಂಟ್ವಾಳ: ಜಾತಿ ಸಮುದಾಯಗಳ ಅವಹೇಳನ ಮಾಡಿದ ಮಹಿಳೆ ವಿರುದ್ಧ ಕಾನೂನು ಕ್ರಮಕ್ಕೆ ತಾಪಂ ಮಾಜಿ ಸದಸ್ಯ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಜಾತಿ ಸಮುದಾಯಗಳ ಬಗ್ಗೆ ಮನಬಂದಂತೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಆಕೆಯ ಬಳಿ ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಮತ್ತೆ ಮುಂದುವರಿದು ಯಾವುದೆ ಕಾನೂನು,ನಿಯಮಗಳನ್ನು ಲೆಕ್ಕಿಸದೇ ನಿಂದಿಸಿರುತ್ತಾರೆ .ಈ ಹಿನ್ನೆಲೆಯಲ್ಲಿ ಈಕೆಯ ಕುರಿತು ಸಾರ್ವಜನಿಕರಲ್ಲಿ ಅನುಮಾನ ಉಂಟಾಗಿದ್ದು, ತನಿಖೆಯಾಗಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.