ಬಂಟ್ವಾಳ: ಸಿದ್ಧಕಟ್ಟೆ ಸಮೀಪ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರವಾಗಿ ಬಿಜೆಪಿ ವತಿಯಿಂದ ವಿಶೇಷ ಹೂವಿನ ಪೂಜೆ ನಡೆಯಿತು.
ಕೃಷ್ಣ ಪ್ರಸಾದ್ ಅಸ್ರಣ್ಣ ವಿಶೇಷ ಪೂಜೆ ನೆರೆವೇರಿಸಿದರು. ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಪ್ರಭಾಕರ. ಎಚ್ ಹುಲಿಮೇರು, ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ದಿನೇಶ್ ಪೂಜಾರಿ ಹುಲಿಮೇರು, ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಆಶಾ ಎಸ್. ಶೆಟ್ಟಿ, ಬೆಳ್ತಂಗಡಿ ಮಂಡಲ ಆರಂಬೋಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ ಅಜ್ಜಾಡಿ , ಬಿಜೆಪಿ ಕಾರ್ಯಕರ್ತರು,ನರೇಂದ್ರ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು