ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗ ಸಮರ್ಪಕವಾಗಿ ಕಾಂಕ್ರೀಟ್ ಹಾಕದೆ ಇರುವ ಕಾರಣ ಹೊಂಡ ಕಾಣಿಸಿಕೊಂಡಿದ್ದು, ಇದರಿಂದ ಪಾದಚಾರಿಗಳಿಗಷ್ಟೇ ಅಲ್ಲ, ವಾಹನ ಸವಾರರಿಗೂ ತೊಂದರೆ ಆಗುತ್ತಿದೆ.
ಹೆದ್ದಾರಿ ಕಾಮಗಾರಿಯ ವೇಳೆ ಅಗೆದಿರುವ ರಸ್ತೆಗೆ ಕಾಂಕ್ರೀಟ್ ಹಾಕದೆ ಇರುವ ಕಾರಣದಿಂದ ಮಳೆಗಾಲ ಆರಂಭದಲ್ಲೇ ಬೃಹತ್ ಗಾತ್ರದ ಹೊಂಡಗುಂಡಿಗಳು ಕಾಣಿಸುತ್ತಿದೆ. ಹೊಂಡದಲ್ಲಿ ಬಿದ್ದ ವಾಹನಗಳು ಎದ್ದೇಳಲು ಸಾಧ್ಯವಾಗದೆ ಹರಸಾಹಸ ಪಡುವ ದೃಶ್ಯಗಳು ಕಂಡುಬಂದಿವೆ. ದ್ವಿಚಕ್ರವಾಹನ ಸವಾರರಂತೂ ರಾತ್ರಿ ವೇಳೆ ಗುಂಡಿಗೆ ಬಿದ್ದು ಪ್ರಾಣಕ್ಕೆ ಅಪಾಯವಾಗುವ ಸಂಭವ ಜಾಸ್ತಿ ಇವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.