ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜುಲೈ 17ರಂದು ಅಮೃತ ಭಾರತ ಯೋಜನೆಯಡಿ 26.18 ಕೋಟಿ ರೂ ವೆಚ್ಚದಲ್ಲಿ ಮರುನಿರ್ಮಾಣಗೊಂಡ ನವೀಕೃತ ಬಂಟ್ವಾಳ ರೈಲ್ವೆ ನಿಲ್ದಾಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
ಮಧ್ಯಾಹ್ನ 3.40ಕ್ಕೆ ಕಾರ್ಯಕ್ರಮ ನಡೆಯಲಿರುವುದು. ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ವಿಡಿಯೋ ಕಾನ್ಫರೆನ್ಸ್ ವೀಕ್ಷಿಸಲು ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದ್ದು, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಹಿತ ಪ್ರಮುಖರು ಉಪಸ್ಥಿತರಿರುವರು ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ಅಮೃತ ಭಾರತ ಸ್ಟೇಶನ್ ಸ್ಕೀಮ್ ನ (ಎಪಿಎಸ್ ಎಸ್ ) ಎರಡನೇ ಹಂತದಲ್ಲಿ ನವೀಕರಣಗೊಂಡ ನೈಋತ್ಯ ರೈಲ್ವೆ ವಲಯದ ನಾಲ್ಕು ರೈಲ್ವೆ ನಿಲ್ದಾಣಗಳು ಅಭಿವೃದ್ಧಿಗೊಂಡರೆ, ದೇಶದಾದ್ಯಂತ ಒಟ್ಟು 75 ರೈಲು ನಿಲ್ದಾಣಗಳು ಅಭಿವೃದ್ಧಿಗೊಂಡಿವೆ. ಇವೆಲ್ಲವೂ ಜುಲೈ 17ರಂದು ವರ್ಚುವಲ್ ಪ್ರಕ್ರಿಯೆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ
(more…)