ಬಂಟ್ವಾಳ

ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಸಚಿವ ಖಾದರ್ ದಿಢೀರ್ ಭೇಟಿ

ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಶುಕ್ರವಾರ ಸಂಜೆ ಬಂಟ್ವಾಳ‌ದ ತಾಲೂಕು ಸರಕಾರಿ ಆಸ್ಪತ್ರೆಗೆ ಧಿಢೀರ್ ಭೇಟಿ ನೀಡಿ, ಆರೋಗ್ಯ ಇಲಾಖೆಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.’

ಆಸ್ಪತ್ರೆಗೆ ಆಗಮಿಸಿದ ರೋಗಿಗಳ ಜತೆಗೆ ಮಾತುಕತೆ ನಡೆಸಿದ ಅವರು ಆಸ್ಪತ್ರೆಯ ಆರೋಗ್ಯ ಅಧಿಕಾರಿಗಳ ಜತೆಗೆ ವರದಿ ಪಡೆದುಕೊಂಡರು. ನಿತ್ಯ ಬರುವ ರೋಗಿಗಳು ಎಷ್ಟು, ಔಷಧಿ ಎಷ್ಟು ಸಂಗ್ರಹವಿದೆ, ಸವಲತ್ತುಗಳು ಏನೆಲ್ಲ ಇದೆ ಇತ್ಯಾದಿ ವಿಷಯಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು. ವೈದ್ಯರ ಹಾಜರಾತಿ ಪುಸ್ತಕ ಪರಿಶೀಲಿಸಿದರು. ಆಸ್ಪತ್ರೆಯ ಕಾರ್ಯ ಚಟುವಟಿಕೆಯನ್ನು ಪರಿಶೀಲಿಸಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಸಚಿವ ಯು.ಟಿ.ಖಾದರ್ ಅವರು ಬಂಟ್ವಾಳ ತಾಲೂಕು ಆಸ್ಪತ್ರೆಯನ್ನು ಇನ್ನೂ ಜನಸ್ನೇಹಿಯಾಗಿ ಅಭಿವೃದ್ಧಿ ಪಡಿಸಬಹುದು ಎನ್ನುವ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಎಂದರು. ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ಹಾಗೂ ಇತರ ವೈದ್ಯರು, ಸಿಬ್ಬಂದಿ ಹಾಜರಿದ್ದರು.

ಜಾಹೀರಾತು
VNR GOLD

ಚಂದ್ರಹಾಸ್ ಆರ್.ಕರ್ಕೇರ, ಬೇಬಿ ಕುಂದರ್, ಅಬ್ದುಲ್ ರಝಾಕ್ ಕುಕ್ಕಾಜೆ, ರಶೀದ್ ವಿಟ್ಲ, ರಿಯಾಜ್ ನರಿಕೊಂಬು, ಸುರೇಶ್ ನಾವೂರು, ಫಯಾಜ್ ಮುಡಿಪು, ಫರೀದ್ ಮುಂತಾದವರು ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.