ಬಂಟ್ವಾಳ: ಸಂಸ್ಕಾರ ಭಾರತೀ ಕರ್ನಾಟಕ ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಆಷಾಢ ಕೃಷ್ಣ ಚತುರ್ಥಿಯ ಅಂಗವಾಗಿ ‘ನಾಟ್ಯಂ ಅವಧಾರಯೇ – ನಟರಾಜ ಪೂಜನ’ ಕಾರ್ಯಕ್ರಮವು ಆಗಸ್ಟ್ 2, 2026ರ ಭಾನುವಾರ ಮಧ್ಯಾಹ್ನ 2.30ಕ್ಕೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಟಿ. ತಾರಾನಾಥ ಕೊಟ್ಟಾರಿ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲಾ ಪ್ರದರ್ಶಕ ಕಲಾ ಸಂಯೋಜಕರಾದ ವಿದ್ವಾನ್ ದೀಪಕ್ ಕುಮಾರ್ ಪುತ್ತೂರು ಅವರು ವಿಚಾರ ಪ್ರಸ್ತುತಿಯನ್ನು ನಡೆಸಲಿದ್ದಾರೆ.
ಸಾಂಸ್ಕೃತಿಕ ಹಾಗೂ ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.