ಬಂಟ್ವಾಳ

ಬಂಟ್ವಾಳ ತಾಲೂಕು ರೈತರ ಸಲಹಾ ಸಮಿತಿ ಅಧ್ಯಕ್ಷರಾಗಿ ಅಬೂಬಕ್ಕರ್ ಅಮ್ಮುಂಜೆ ಆಯ್ಕೆ

OPTIC WORLD
VNR GOLD

ಬಂಟ್ವಾಳ: ರಾಜ್ಯ ಸರ್ಕಾರದ ನಿರ್ದೇಶನದಂತೆ ಬಂಟ್ವಾಳ ತಾಲೂಕು ಕೃಷಿ ಇಲಾಖೆಯ ಕಚೇರಿಯಲ್ಲಿ ಗುರುವಾರ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆಯ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ರೈತರ ಸಲಹಾ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ರೈತರ ಪ್ರತಿನಿಧಿಗಳ ಸಮ್ಮುಖ ಸಮಿತಿ ರಚನೆ ಪ್ರಕ್ರಿಯೆ ನಡೆಸಲಾಗಿದ್ದು, ಅಬೂಬಕ್ಕರ್ ಅಮ್ಮುಂಜೆ ಅವರನ್ನು ಸರ್ವಾನುಮತದಿಂದ ಬಂಟ್ವಾಳ ತಾಲೂಕು ರೈತರ ಸಲಹಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ಅಧಿಕಾರಿಗಳು, ರೈತರ ಸಲಹಾ ಸಮಿತಿಯು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲಿದ್ದು, ರೈತರು ಎದುರಿಸುತ್ತಿರುವ ಸಮಸ್ಯೆಗಳು, ಸರ್ಕಾರದ ವಿವಿಧ ಕೃಷಿ, ತೋಟಗಾರಿಕೆ ಹಾಗೂ ಪಶು ಸಂಗೋಪನಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಹೊಸ ತಂತ್ರಜ್ಞಾನಗಳ ಅಳವಡಿಕೆ ಹಾಗೂ ಇಲಾಖೆಗಳೊಂದಿಗೆ ರೈತರ ಸಮನ್ವಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

ಜಾಹೀರಾತು

ಸಭೆಯಲ್ಲಿ ಕೃಷಿ ಸಹಾಯಕ ನಿರ್ದೇಶಕಿ ವೀಣಾ ರೈ, ತಾಲೂಕು ಕೃಷಿ ತಾಂತ್ರಿಕ ಅಧಿಕಾರಿ ನಂದನ್ ಶೆಣೈ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ  ಜೋ ಪ್ರದೀಪ್ ಡಿ.ಸೋಜಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರೈತರ ಪ್ರತಿನಿಧಿಗಳು ಹಾಗೂ ಕೃಷಿಕರು ಉಪಸ್ಥಿತರಿದ್ದರು.

ಹೊಸದಾಗಿ ರಚನೆಯಾದ ರೈತರ ಸಲಹಾ ಸಮಿತಿಯು ತಾಲೂಕಿನ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡುವ ವಿಶ್ವಾಸವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts