ಬಂಟ್ವಾಳ: ಭೂಮಿ ತಂತ್ರಾಂಶದಲ್ಲಿ ಯುನಿಕೋಡ್ ಕನ್ವರ್ಷನ್ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಭೂಮಿ ಶಾಖೆಯಲ್ಲಿ ಕೆಲವು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 3ರಿಂದ 17ರವರೆಗೆ ಬಂಟ್ವಾಳ ತಾಲೂಕು ಭೂಮಿ ಶಾಖೆಯಲ್ಲಿ ಯಾವುದೇ ರೀತಿಯ ಅರ್ಜಿ ವ್ಯವಹಾರಗಳನ್ನು ನಡೆಸಲಾಗುವುದಿಲ್ಲ. ಅಲ್ಲದೆ, ಈ ಅವಧಿಯಲ್ಲಿ ಆರ್ಟಿಸಿ ಹಾಗೂ ಮ್ಯುಟೇಷನ್ ಪ್ರತಿಗಳನ್ನು ಸಾರ್ವಜನಿಕರಿಗೆ ನೀಡುವುದೂ ಸಾಧ್ಯವಾಗುವುದಿಲ್ಲ ಎಂದು ತಿಳಿಸಲಾಗಿದೆ. ಯುನಿಕೋಡ್ ಕನ್ವರ್ಷನ್ ಕಾರ್ಯ ಸುಗಮವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಈ ವಿಷಯವನ್ನು ಗಮನಿಸಿ ಅನಗತ್ಯವಾಗಿ ಕಚೇರಿಗೆ ಭೇಟಿ ನೀಡುವುದನ್ನು ತಪ್ಪಿಸುವಂತೆ ಕೋರಲಾಗಿದೆ.