ಅಖಂಡ ಭಾರತ ಸಂಕಲ್ಪ ದಿನ: ಮಂಗಳೂರು ಗ್ರಾಮಾಂತರ ಜಿಲ್ಲೆಯ ಐದು ಕಡೆ ಹಿಂಜಾವೇ ಕಾರ್ಯಕ್ರಮ

ಹಿಂದು ಜಾಗರಣಾ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಜಿಲ್ಲೆಯ ಕಲ್ಲಡ್ಕ, ತಲಪಾಡಿ ದೇವಿಪುರ, ವಾಮದಪದವು, ಮೂಡುಬಿದಿರೆ ಹಾಗೂ ಬಿ.ಸಿ.ರೋಡ್ ಗಳಲ್ಲಿ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ನಿಮಿತ್ತ ಜಾಥಾ ಹಾಗೂ ಸಭೆ ಆಯೋಜಿಸಲಾಗಿದೆ.

OPTIC WORLD

ಶನಿವಾರ ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸಭಾ ಕಾರ್ಯಕ್ರಮಗಳಲ್ಲಿ ಪ್ರಮುಖ ನಾಯಕರು ಭಾಗವಹಿಸಿ ದಿಕ್ಸೂಚಿ ಮಾರ್ಗದರ್ಶನ ನೀಡುವರು.

VNR GOLD

ಆಗಸ್ಟ್ 9ರಂದು ವಿಟ್ಲ ತಾಲೂಕು ವ್ಯಾಪ್ತಿಯಲ್ಲಿ ಸಂಜೆ 3 ಗಂಟೆಗೆ ಮಾಣಿ ಜಂಕ್ಷನ್, ವೀರಕಂಬ ಗಣೇಶ ಮಂದಿರ ಹಾಗೂ ಪಾಣೆಮಂಗಳೂರು ಸತ್ಯದೇವತೆ ದೈವಸ್ಥಾನದಿಂದ ಏಕಕಾಲದಲ್ಲಿ ವಾಹನ ಜಾಥಾಗಳು ಆರಂಭವಾಗಲಿವೆ. ಮೂರು ಜಾಥಾಗಳು ಕಲ್ಲಡ್ಕಕ್ಕೆ ಆಗಮಿಸಲಿದ್ದು, ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು

ಅದೇ ದಿನ ಸಂಜೆ 3 ಗಂಟೆಗೆ ತಲಪಾಡಿ ಮಹಾದ್ವಾರದ ಬಳಿಯಿಂದ ವಾಹನ ಜಾಥಾ ಆರಂಭವಾಗಲಿದೆ. ಬಳಿಕ ತಲಪಾಡಿ ದೇವಿಪುರ ದೇವಸ್ಥಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಸಂಜೆ 6.30ಕ್ಕೆ ವಾಮದಪದವಿನಲ್ಲಿ ಗಣೇಶ ಮಂದಿರದ ವಠಾರದಿಂದ ಪಂಜಿನ ಮೆರವಣಿಗೆ ನಡೆಯಲಿದ್ದು, ಪೇಟೆ ಸಂಚರಿಸಿ ಬಳಿಕ ಗಣೇಶ ಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 6.30ಕ್ಕೆ ಮೂಡುಬಿದಿರೆ ಸಾವಿರ ಕಂಬ ಬಸದಿ ಬಳಿಯಿಂದ ಪಂಜಿನ ಮೆರವಣಿಗೆ ಆರಂಭವಾಗಿ ಪೇಟೆಯ ಮೂಲಕ ಸಮಾಜ ಮಂದಿರಕ್ಕೆ ತೆರಳಿ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.

ಸಮಾರೋಪ ಕಾರ್ಯಕ್ರಮ ಆಗಸ್ಟ್ 14ರಂದು ಸಂಜೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದ್ದು, ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಪಂಜಿನ ಮೆರವಣಿಗೆ ಆರಂಭಗೊಂಡು ಸ್ಪರ್ಶ ಕಲಾ ಮಂದಿರವರೆಗೆ ಸಾಗಿ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನ್ಯಾಯ ಜಾಗರಣಾ ಜಿಲ್ಲಾ ಸಂಯೋಜಕ ರಾಜೇಶ್ ಬೊಳ್ಳುಕಲ್ಲು,  ಜಿಲ್ಲಾ ಸಹ ಸಂಯೋಜಕ ಪುಷ್ಪರಾಜ ಕಮ್ಮಾಜೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಅನೂಪ್ ಮಯ್ಯ, ಸಂತೋಷ ಕುರಿಯಾಳ ಹಾಗೂ ಪ್ರಶಾಂತ್ ಕೆಂಪುಗುಡ್ಡೆ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಖಂಡ ಭಾರತ ಸಂಕಲ್ಪ ದಿನ: ಮಂಗಳೂರು ಗ್ರಾಮಾಂತರ ಜಿಲ್ಲೆಯ ಐದು ಕಡೆ ಹಿಂಜಾವೇ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*