
ಶಾಲಾ ಶಿಕ್ಷಣ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ದ.ಕ.ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರ ಕಾರ್ಯಾಲಯ, ಬಂಟ್ವಾಳ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ ಬಾಲಕಿಯರ ಟೇಬಲ್ ಟೆನ್ನೀಸ್ ಪಂದ್ಯಾಟ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜರಗಿತು.
ಸಮಾಜ ಸೇವಕ ಹಾಗೂ ಉದ್ಯಮಿ ಮಂಜುನಾಥ್ ಆಚಾರ್ಯ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದಪ್ಪ ಎಲ್.ಬಿ ಭಾಗವಹಿಸಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾರೀರಿಕ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವಳದ ಮೊಕ್ತೇಸರ ಮತ್ತು ಶಾಲಾ ಸಂಚಾಲಕ ಬಿ. ಸುರೇಶ್ ವಿ. ಬಾಳಿಗಾ ಮಾತನಾಡಿ, ಟೇಬಲ್ ಟೆನ್ನೀಸ್ ಪಂದ್ಯಾಟ ಕ್ರೀಡಾಪಟುಗಳ ಮಾನಸಿಕ ಸ್ಥಿರತೆ, ತಾಳ್ಮೆಗೆ ಪೂರಕವಾದ ಆಟವಾಗಿದೆ ಎಂದರು.

ಫಲಿತಾಂಶ:
ಸುಮಾರು 28 ತಂಡಗಳು 4 ವಿಭಾಗದಲ್ಲಿ ಭಾಗವಹಿಸಿದವು. ಪಂದ್ಯಾಟದಲ್ಲಿ ಎಸ್.ವಿ.ಎಸ್.ದೇವಳ ಆಂಗ್ಲಮಾಧ್ಯಮ ಶಾಲೆ ಬಂಟ್ವಾಳ ವಿದ್ಯಾರ್ಥಿಗಳು ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಪ್ರಥಮ, ದ್ವಿತೀಯ ಸ್ಥಾನವನ್ನು ಸೈಂಟ್ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಪಡೆದುಕೊಂಡಿತು.ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಎಸ್.ವಿ.ಎಸ್.ದೇವಳ ಆಂಗ್ಲಮಾಧ್ಯಮ ಶಾಲೆ ಬಂಟ್ವಾಳ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಸೈಂಟ್ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲ್ ಬೈಲ್ ಪಡೆದುಕೊಂಡಿತು. ಪ್ರೌಢಶಾಲಾ ಬಾಲಕರಲ್ಲಿ ಪ್ರಥಮ ಸ್ಥಾನವನ್ನು ಎಸ್.ವಿ.ಎಸ್.ದೇವಳ ಆಂಗ್ಲಮಾಧ್ಯಮ ಶಾಲೆ ಬಂಟ್ವಾಳ, ದ್ವಿತೀಯ ಸ್ಥಾನವನ್ನು ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ ಕುಲಶೇಖರ ಪಡೆದುಕೊಂಡಿತು. ಪ್ರೌಢಶಾಲಾ ಬಾಲಕಿಯರಲ್ಲಿ ಎಸ್.ವಿ.ಎಸ್.ದೇವಳ ಆಂಗ್ಲಮಾಧ್ಯಮ ಶಾಲೆ ಬಂಟ್ವಾಳ ಪ್ರಥಮ ಸ್ಥಾನವನ್ನು , ಎಸ್.ಡಿ.ಎಂ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ವಿಷ್ಣುನಾರಾಯಣ್ ಹೆಬ್ಬಾರ್ , ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಬಿ.ಆರ್. ಸಿ ವಿದ್ಯಾ, ಶಿಕ್ಷಣ ಸಂಯೋಜಕ ರಮಾನಂದ್, ಆಡಳಿತ ಮಂಡಳಿ ಸದಸ್ಯರಾದ ಶಿವಾನಂದ ಬಾಳಿಗಾ, ವೆಂಕಟರಮಣ ಶೆಣೈ, ಲಕ್ಷ್ಮಣ್ ಶೆಣೈ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಗಂಗಾಧರ ಆಳ್ವ, ಮುಖ್ಯೋಪಾಧ್ಯಾಯಿನಿ ರೋಷನಿ ತಾರಾ ಡಿ’ಸೋಜ, ಸಹ ಮುಖ್ಯೋಪಾಧ್ಯಾಯಿನಿ ಜಾನಕಿ ರಾಜೇಶ್ , ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ವೇದಾವತಿ, ಸಂಘದ ವಿವಿಧ ಪದಾಧಿಕಾರಿಗಳಾದ ಜಗದೀಶ್ ರೈ, ಶಿವಪ್ರಸಾದ ಶೆಟ್ಟಿ, ಜಯರಾಮ, ನವೀನ್ ಪಿ.ಎಸ್, ಚಿನ್ನಪ್ಪ ಉಪಸ್ಥಿತರಿದ್ದರು. ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರವಿಚಂದ್ರ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷೆ ಚಿತ್ರಾ ಯಡಪಡಿತ್ತಾಯ, ಬಂಟ್ವಾಳ ಲಯನ್ಸ್ ಕ್ಲಬ್ ಕೋಶಾಧಿಕಾರಿ ಸುಮಾ ಸುನೀಲ್ ಇವರು ವಿಜೇತ ಮಕ್ಕಳಿಗೆ ಟ್ರೋಫಿ ಹಾಗೂ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಎಂ ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಧಿಕಾರಿ ಆಶಾ ನಾಯಕ್ ವಂದಿಸಿದರು. ಶಿಕ್ಷಕ ಮುರಳೀಧರ ಆಚಾರ್ಯ ನಿರೂಪಿಸಿದರು.


Be the first to comment on "ಬಂಟ್ವಾಳದಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ"