ಬಂಟ್ವಾಳ: ಬಂಟ್ವಾಳ ಬಿಜೆಪಿ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಆಟಿದ ಗಮ್ಮತ್ ಕಾರ್ಯಕ್ರಮ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಆಟಿ ತಿಂಗಳ ವಿಶೇಷ ಆಹಾರ ಪದ್ಧತಿ, ಆಚರಣೆ ಹಾಗೂ ಜನಪದ ಸಂಪ್ರದಾಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕು ಎಂದು ಹೇಳಿದರು.
ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹಿಳಾ ಮೋರ್ಚಾ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯಿಂದ ಪಕ್ಷ ಸಂಘಟನೆ ಮತ್ತಷ್ಟು ಸದೃಢವಾಗಲಿದೆ ಎಂದು ತಿಳಿಸಿದರು.

ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್ ಮಾತನಾಡಿ, ಸಾಂಪ್ರದಾಯಿಕ ಆಚರಣೆಗಳ ಮೂಲಕ ಸಮಾಜದಲ್ಲಿ ಪರಸ್ಪರ ಬಾಂಧವ್ಯ ಬೆಳೆಸುವ ಕೆಲಸವೂ ನಡೆಯಬೇಕು ಎಂದರು.

ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸುಲೋಚನ ಜಿ.ಕೆ. ಭಟ್ ಅವರು ಆಟಿ ತಿಂಗಳ ವಿಶೇಷತೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಬಂಟ್ವಾಳ ಮಂಡಲದ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ ಹಾಗೂ ಸುದರ್ಶನ ಬಜ, ನಾಟಿ ವೈದ್ಯ ಗಂಗಾಧರ ಪಂಡಿತ್ ಗೋಳಿಕಟ್ಟೆ, ಬಂಟ್ವಾಳ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಶೆಟ್ಟಿ, ಮಹಿಳಾ ಮೋರ್ಚಾ ಪ್ರಭಾರಿ ಹರ್ಷಿಣಿ ಪುಷ್ಪಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷತಾ ಉಪಸ್ಥಿತರಿದ್ದರು. ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಶ್ರೀ ಸ್ವಾಗತಿಸಿದರು. ಪುಷ್ಪಾ ಕಾಮತ್ ವಂದಿಸಿದರು. ರಜನಿ ಚಿಕ್ಕಯ್ಯಮಠ ಕಾರ್ಯಕ್ರಮ ನಿರೂಪಿಸಿದರು.


Be the first to comment on "ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ‘ಆಟಿದ ಗಮ್ಮತ್’, ಜನಪದ ಸಂಪ್ರದಾಯ ಪರಿಚಯ ಅಗತ್ಯ: ಶಾಸಕ ರಾಜೇಶ್ ನಾಯ್ಕ್"