ಪೊಳಲಿ ಸರಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ ನವೆಂಬರ್ ನಲ್ಲಿ ನಡೆಯಲಿದ್ದು, ಇದರ ಲಾಂಛನ ಬಿಡುಗಡೆ ಸಮಾರಂಭ ನಡೆಯಿತು.
ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಕಾರ್ಯ ಅಧ್ಯಕ್ಷರಾದ ವೆಂಕಟೇಶ ನಾವಡ ವಹಿಸಿದ್ದರು. ವಿವೇಕ ಚೈತನ್ಯಾನಂದ ಸ್ವಾಮೀಜಿ ಕಾರ್ಯಕ್ರಮಕ್ಕೆ ಶುಭ ಸಂದೇಶ ಸಾರಿದರು. ವಾರ್ಷಿಕೋತ್ಸವದ ಹಲವು ಸಮಿತಿಗಳಿಗೆ ಅಧ್ಯಕ್ಷರನ್ನು ನೇಮಿಸಲಾಯಿತು ಮತ್ತು ಕಾರ್ಯ ಹಂಚಿಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸುಬ್ರಾಯ ಕಾರಂತ, ಯಶವಂತ ಪೂಜಾರಿ, ಲೋಕೇಶ ಭರಣಿ , ಚಂದ್ರಾವತಿ ದೇವಾಡಿಗ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಸುಬ್ರಾಯ ಪೈ ಸ್ವಾಗತಿಸಿದರು. ಚಿತ್ರಕಲಾ ಶಿಕ್ಷಕರಾದ ಮುರಳೀಧರ ಆಚಾರ್ಯ ವಿಂಶತಿ ಪರ್ವದ ಲಾಂಛನದ ರಚನೆಯ ಹಿಂದಿನ ಅರ್ಥವನ್ನು ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಜಯಂತ ಆಚಾರ್ಯ ಧನ್ಯವಾದ ಸಮರ್ಪಿಸಿದರು. ವಸಂತಿ ಕಾರ್ಯಕ್ರಮ ನಿರೂಪಣೆ ಮಾಡಿದರು.
(more…)