ಬಂಟ್ವಾಳ

ಫಂಡ್ ಇಲ್ಲ ಎಂಬ ದೂರು ಹಿನ್ನೆಲೆ: ತನ್ನ ವೈಯಕ್ತಿಕ ಖರ್ಚಲ್ಲೇ ಕೆಲಸ ಮಾಡಿಸಿದ ಶಾಸಕ ರಾಜೇಶ್ ನಾಯ್ಕ್

VNR GOLD

ಬಂಟ್ವಾಳ ಪುರಸಭಾ ವ್ಯಾಪ್ತಿಯ ವಿವಿಧೆಡೆ ರಸ್ತೆ ಬದಿಯಲ್ಲಿ ಬೆಳೆದು ನಿಂತಿದ್ದ ಹುಲ್ಲು, ಪೊದೆಗಳಿಂದಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದು, ಇದನ್ನು ನಿವಾರಿಸಲು ಪುರಸಭೆಯಲ್ಲಿ ಹಣವಿಲ್ಲ ಎಂದು ಪುರಸಭಾ ಮಾಜಿ ಸದಸ್ಯರು ಶಾಸಕರ ಬಳಿ ದೂರು ನೀಡಿದ ಹಿನ್ನೆಲೆ ಶಾಸಕ ರಾಜೇಶ್ ನಾಯ್ಕ್ ವೈಯಕ್ತಿಕ ಖರ್ಚಿನಿಂದ ನೆರವಾಗಿದ್ದಾಗಿ ಶಾಸಕರ ಮಾಧ್ಯಮ ಪ್ರಕಟಣೆ ತಿಳಿಸಿದೆ.

OPTIC WORLD

ಪುರಸಭಾ ಮಾಜಿ ಸದಸ್ಯರುಗಳ ಸಹಕಾರಿಂದ  ಕಾರ್ಮಿಕರನ್ನು ನಿಯೋಜಿಸಿ ತೆರವು ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ರಸ್ತೆ ಬದಿಗಳಲ್ಲಿ ಹುಲ್ಲು ಹಾಗೂ ಪೊದೆಗಳು ಬೆಳೆದು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿತ್ತು. ಹಲವು ಕಡೆ ವಾಹನಗಳ ಸಂಚಾರಕ್ಕೂ ಅಡಚಣೆಯಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ, ಪೊದೆಗಳ ನಡುವೆ ಹಾವು ಸೇರಿದಂತೆ ವಿಷಜಂತುಗಳು ಸೇರಿಕೊಳ್ಳುವ ಸಾಧ್ಯತೆಯಿಂದ ಸ್ಥಳೀಯರಲ್ಲಿ ಆತಂಕ ಕುರಿತು ಪುರಸಭಾ ಮಾಜಿ ಸದಸ್ಯರು ಹಾಗೂ ಸಾರ್ವಜನಿಕರಾದ ವಿದ್ಯಾವತಿ ಪ್ರಮೋದ್ ಕುಮಾರ್, ಚೈತನ್ಯ ಗಣೇಶ್ ದಾಸ್, ಜಯಂತಿ, ದೇವಕಿ, ಶಶಿಕಲಾ ಸೇರಿದಂತೆ ಹಲವರು ಶಾಸಕರನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದ್ದರು. ರಸ್ತೆ ಬದಿಯ ಹುಲ್ಲು ಹಾಗೂ ಪೊದೆಗಳನ್ನು ತೆರವುಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಸೂಕ್ತ ಸ್ಪಂದನೆ ದೊರೆಯಲಿಲ್ಲ ಎಂದು ಶಾಸಕರಲ್ಲಿ ಅವರು ಆರೋಪಿಸಿದ್ದರು.

ಜಾಹೀರಾತು
D.SHIVA BHAT JWELLERS
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts