ಕೆಎಸ್ಆರ್ಟಿಸಿ ಬಿ.ಸಿ.ರೋಡ್ ಡಿಪೋದಲ್ಲಿ ಸಿಬ್ಬಂದಿಗಳಿಗಾಗಿ ಸಿಪಿಆರ್ ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ನಡೆಯಿತು.
ತುರ್ತು ಸಂದರ್ಭದಲ್ಲಿ ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ತಕ್ಷಣದ ನೆರವು ನೀಡುವ ಉದ್ದೇಶದಿಂದ ಆಯೋಜಿಸಲಾದ ಈ ತರಬೇತಿ ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಯ ಕಂಕನಾಡಿ, ತುಂಬೆ, ನರ್ಸಿಂಗ್ ಕಾಲೇಜಿನ ವೈದ್ಯರು ಮತ್ತು ಸಿಬ್ಬಂದಿ ಭಾಗವಹಿಸಿ ತರಬೇತಿ ನೀಡಿದರು.
ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿಯ ಡಾ. ಅನಂತ್ ಕೃಷ್ಣ ಸೋಮಯಾಜಿ, , ಡಾ. ಕಾರ್ತಿಕ್ ಹಾಗೂ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ರೀನಾ ಫ್ರಾಂಕ್ ಭಾಗವಹಿಸಿ, ಸಿಪಿಆರ್, ಪ್ರಥಮ ಚಿಕಿತ್ಸೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಿಬ್ಬಂದಿಗೆ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ತರಬೇತಿ ನೀಡಿದರು.
ಕಾರ್ಯಕ್ರಮದ ಸಮನ್ವಯವನ್ನು ಫಾದರ್ ಮುಲ್ಲರ್ ಆಸ್ಪತ್ರೆ, ತುಂಬೆಯ ಪಿಆರ್ಒ ತ್ರಿವೇಣಿ ವಹಿಸಿದ್ದರು. ಕೆಎಸ್ಆರ್ಟಿಸಿ ಬಿ.ಸಿ.ರೋಡ್ ಡಿಪೋ ಮ್ಯಾನೇಜರ್ ಪಿ. ಇಸ್ಮಾಯಿಲ್ ನೇತೃತ್ವದಲ್ಲಿ ಹಾಗೂ ಎಡಬ್ಲ್ಯುಎಸ್ ವಿನಯಾ ಜಿ. ರೈ ಸಹಕಾರದೊಂದಿಗೆ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಪ್ರಭಾವತಿ ನಿರೂಪಿಸಿದರು.