ಬಂಟ್ವಾಳ

ಸುಮಂಗಲಾ  ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪಾಣೆಮಂಗಳೂರು; 2.04 ಕೋ.ರೂ.ಲಾಭ

ಪಾಣೆಮಂಗಳೂರಿನ ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತ 2025-26ರ ಸಾಲಿನಲ್ಲಿ 646.04 ಕೋ.ರೂ. ವ್ಯವಹಾರ ನಡೆಸಿ 2.04 ಕೋ.ರೂ.ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ನಾಗೇಶ್ ಕಲ್ಲಡ್ಕ ಹೇಳಿದರು.

ಸಂಘದ 34 ನೇ ವಾರ್ಷಿಕ  ಮಹಾಸಭೆಯಲ್ಲಿ ಅವರು ಮಾತನಾಡಿದರು. 2026ರ ಮಾರ್ಚ್ ಅಂತ್ಯಕ್ಕೆ 3021ಎ ತರಗತಿ  ಸದಸ್ಯರಿದ್ದು, 5.52 ಕೋ.ರೂ.ಪಾಲು ಬಂಡವಾಳ ಹೊಂದಿದೆ. 2026ರ ಮಾರ್ಚ್ ಅಂತ್ಯಕ್ಕೆ 91ಕೋ.ರೂ.ಠೇವಣಾತಿ, 6.48 ಕೋ.ರೂ. ವಿವಿಧ ನಿಧಿಗಳಲ್ಲಿ ಇದ್ದು ಮತ್ತು 87.09 ಕೋ.ರೂ  ರೂ.ಸಾಲ ಹೊರ ಬಾಕಿ ಇದೆ. ಕಳೆದ ಸಾಲಿನಲ್ಲಿ 164.26 ಕೋ.ರೂ. ಸಾಲ ವಿತರಿಸಿದ್ದು, 145.49 ಕೋ.ರೂ. ಸಾಲವನ್ನು ವಸೂಲಿ ಮಾಡಲಾಗಿದೆ. ವರದಿ ವರ್ಷದಲ್ಲಿ ಷೇರುದಾರರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ ಎಂದರು.

OPTIC WORLD

ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 2025-26 ನೇ ಸಾಲಿಗೆ ಸಾಧನಾ ಪ್ರಶಸ್ತಿ ಪಡೆದಿರುವುದರೊಂದಿಗೆ ಸತತ 6ನೇ ಬಾರಿಗೆ ಈ ಪ್ರಶಸ್ತಿಯನ್ನು ಪಡೆದಿರುತ್ತದೆ ಎಂದು ಅಧ್ಯಕ್ಷರು ತಿಳಿಸಿದರು.

ಜಾಹೀರಾತು
VNR GOLD

1993 ರಲ್ಲಿ ಸ್ಥಾಪನೆಗೊಂಡ ಸಹಕಾರ ಸಂಘವು 9 ಶಾಖೆಗಳನ್ನು ಹೊಂದಿದ್ದು, ತುಂಬೆ ಶಾಖೆಗೆ ಸ್ವಂತ ಕಟ್ಟಡ ಖರೀದಿಸಿದ್ದು, ಸಂಘವು ಪ್ರಗತಿಯತ್ತ ಮುಂದುವರಿದಿದೆ ಎಂದು ಅಧ್ಯಕ್ಷರು ಈ ಸಂದರ್ಭದಲ್ಲಿ ತಿಳಿಸಿದರು.

D.SHIVA BHAT JWELLERS

ಸಂಘದ ಮುಖ್ಯ ಕಾರ್ಯನಿರ್ವಾಹಕ ವಸಂತ್ ಪಿ. ಅವರು ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರಗಳನ್ನು ಮಂಡಿಸಿದರು. ಲೆಕ್ಕಿಗರಾದ ಸುರೇಂದ್ರ ಅವರು ಕಳೆದ ಮಹಾಸಭೆಯ ನಿರ್ಣಯಗಳನ್ನು ಓದಿ ಹೇಳಿದರು. ಉಪಾಧ್ಯಕ್ಷರಾದ ಸಚಿನ್ ಮೆಲ್ಕಾರ್, ನಿರ್ದೇಶಕರಾದ ನರ್ಸಪ್ಪ ಅಮೀನ್, ಈಶ್ವರ್ ಮೆಲ್ಕಾರ್, ದಿನೇಶ್ ಬಂಗೇರ, ಪೂವಪ್ಪ ಸಪಲ್ಯ ದರಿಬಾಗಿಲು, ಸದಾಶಿವ ಬರಿಮಾರ್, ಪ್ರಕಾಶ್ ಸಪಲ್ಯ ಜಕ್ರಿಬೆಟ್ಟು, ಭುವನೇಶ್ ಮೊಗರ್ನಾಡು, ಶರತ್ ಕುಮಾರ್, ಚೇತನ್ ಸಿ.ಎಸ್, ಪುಷ್ಪಾ ನಾಗೇಶ್, ಪವಿತ್ರ ಪದ್ಮನಾಭ ಹಾಗೂ ಬಂಟ್ವಾಳ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ಉಪಸ್ಥಿತರಿದ್ದರು.

ಸೇವಾ ನಿವೃತ್ತಿಗೊಳ್ಳಲಿರುವ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರನ್ನು ಆಡಳಿತ ಮಂಡಳಿ ಪರವಾಗಿ ಸನ್ಮಾನಿಸಲಾಯಿತು. ನಿರ್ದೇಶಕರಾದ ಬಾಲಕೃಷ್ಣ ಸೆರ್ಕಳ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.