ಬಂಟ್ವಾಳ

ಬೆಂಜನಪದವು ಕಾಲೇಜಿನಲ್ಲಿ ಕಾಮರ್ಸ್ ಒಲಿಂಪಿಯಾಡ್.

OPTIC WORLD
VNR GOLD
D.SHIVA BHAT JWELLERS

ಬೆಂಜನಪದವಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರಿನ ಎಎಸ್ ಸಿ ಎ ಸಂಸ್ಥೆಯ ಸಹಯೋಗದೊಂದಿಗೆ ಕಾಮರ್ಸ್ ಒಲಿಂಪಿಯಾಡ್ ಮತ್ತು ಪಿ ಯು ಸಿ ನಂತರ ಇರುವ ವ್ಯಾಸಂಗ ಹಾಗೂ ಉದ್ಯೋಗ ಅವಕಾಶಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಸಲಾಯಿತು.

ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಮಾನಸ ಶೆಟ್ಟಿ ಹಾಗೂ ವಿಶ್ವ ಜೋಯಿಸ್ ಅವರು ಒಲಿಂಪಿಯಾಡ್ ನಿರ್ವಹಿಸಿದರು ಮತ್ತು ವಿಜೇತರಿಗೆ ಬಹುಮಾನ ವಿತರಿಸಿದರು.

ದ್ವಿತೀಯ ವಾಣಿಜ್ಯ ವಿಭಾಗದ ಸಾತ್ವಿಕ್ ಫುರ್ಟಾಡೋ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಪ್ರಥಮ ವಾಣಿಜ್ಯ ವಿಭಾಗದ ಹರ್ಷಿತ್ ದ್ವಿತೀಯ ಸ್ಥಾನ, ಫಾತಿಮಾ ತ್ವೈಬಾ ಹಾಗೂ ಪ್ರಜ್ವಲ್ ಡಿ ಕುಲಾಲ್ ತೃತೀಯ ಸ್ಥಾನ ಪಡೆದರು.

ಜಾಹೀರಾತು

ಪ್ರಿನ್ಸಿಪಾಲ್ ಕವಿತ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಹಾಕಿಕೊಂಡು ಅಧ್ಯಯನಶೀಲರಾದಾಗ ಒದಗಿಸುವ ಅವಕಾಶಗಳು ಸಾರ್ಥಕವಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ಪಾಡಿ ಎಸ್ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಚಂದ್ರಶೇಖರ ಎಎಸ್ ಸಿ ಎ ನಿರ್ದೇಶಕ ಅನ್ವೇಷ್ ಶೆಟ್ಟಿ ಹಾಗೂ ಸಂಸ್ಥೆಯ ಸರ್ವ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.