ಬಿ.ಸಿ.ರೋಡ್: ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ಗುರುಪೂಜೋತ್ಸವ, ವಿದ್ಯಾರ್ಥಿವೇತನ ವಿತರಣೆ

ಬಿ.ಸಿ.ರೋಡಿನ ಹೃದಯಭಾಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಉದ್ಘಾಟನೆ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ೧೭೨ನೇ ಜನ್ಮದಿನಾಚರಣೆ ಅಂಗವಾಗಿ ಗುರು ಪೂಜೋತ್ದವ ಹಾಗೂ ವಿದ್ಯಾರ್ಥಿವೇತನ ವಿತರಣೆ ಮತ್ತು ಭಾನುವಾರ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ವತಿಯಿಂದ ನಡೆಯಿತು.

oplus_3145728

ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿದ ಬ್ರಹ್ಮಶ್ರೀ ನಾರಾಯಣಗುರು ವೃತ್ತವನ್ನು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಿದರು. ಈ ವೃತ್ತದ ನಿರ್ವಹಣೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ವಹಿಸಲಿದೆ. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

VNR GOLD

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಯಾ. ಚೌಟ, ಮೌನ ಕ್ರಾಂತಿಯ ಮೂಲಕ ಸಮಾಜಕ್ಕೆ ಬೆಳಕಾದ ಶ್ರೇಷ್ಠ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ, ತತ್ವ ಪಾಲನೆಯನ್ನು ಮಾಡುವುದು ಇಂದು ಅಗತ್ಯ. ಎಂದರು.

ಜಾಹೀರಾತು
D.SHIVA BHAT JWELLERS

ಅಧ್ಯಕ್ಷತೆಯನ್ನು ವಹಿಸಿದ್ದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಮಾತನಾಡಿ, ತನ್ನ ತಂದೆಯವರಾದ ಸೇಸಪ್ಪ ಕೋಟ್ಯಾನ್ ಹಿಂದಿನ ಬಾರಿ ಬ್ರಹ್ಮಶ್ರಿ ನಾರಾಯಣಗುರು ವೃತ್ತ ಉದ್ಘಾಟಿಸಿದರೆ, ಇಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿಕೊಟ್ಟ ಸುಂದರ ವೃತ್ತದ ಅದ್ದೂರಿಯಾದ  ಉದ್ಘಾಟನಾ ಕಾರ್ಯ ಜನಸಾಗರದ ಮಧ್ಯೆ ಗಣ್ಯರಿಂದ ನಡೆದಿದ್ದು, ಇದು ತನ್ನ ಅಧ್ಯಕ್ಷತೆ ಅವಧಿಯಲ್ಲಿ ನಡೆದಿರುವುದು ಸಂತಸ ತಂದಿದೆ ಎಂದರು. ಸಂಘಟನೆಯ ಬಲವರ್ಧನೆಗೆ ಸರ್ವರೂ ಉತ್ತಮ ಸಹಕಾರ ನೀಡುತ್ತಿರುವುದನ್ನು ಪ್ರಸ್ತಾಪಿಸಿದ ಅವರು, ವಿದ್ಯಾರ್ಥಿವೇತನಕ್ಕೆ ಸಮಾಜದ ಸಹಕಾರ ಇನ್ನಷ್ಟು ಬರಲಿ ಎಂದರು

OPTIC WORLD

 ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಬ್ರಹ್ಮಶ್ರೀ ನಾರಾಯಣಗುರುಗಳು ಅಪ್ರತಿಮ ರಾಷ್ಟ್ರಭಕ್ತರು. ಅಂಧಕಾರದಿಂದ ಜ್ಞಾನದೆಡೆ ಸಾಗುವಂತೆ ಮಾಡಿದ ಶ್ರೇಷ್ಠ ಸಂತ. ಇಂದಿನ ಯುವಪೀಳಿಗೆ ಅವರ ತತ್ವಾದರ್ಶ ಕುರಿತು ಮಾಹಿತಿ ಇರಬೇಕು ಎಂದರು. ಸಮಾಜಕ್ಕೆ ಸಾಮರಸ್ಯ ಸಹಬಾಳ್ವೆ ಸಮಾನತೆಯ , ಮಾನವ ಧರ್ಮವೇ ಶ್ರೇಷ್ಠ ಧರ್ಮ ಎಂಬುದಾಗಿ ಸಂದೇಶವನ್ನು ಸಾರಿದ ಸಂತ, ಸಮಾಜ ಸುಧಾರಕ, ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳು ಸರ್ವಕಾಲಕ್ಕೂ ಅನ್ವಿಯಿಸುತ್ತದೆ. ಹಾಗಾಗೀ ಸಮಾಜದ ಕನಸಾಗಿದ್ದ ಹಾಗೂ ಬಹುಕಾಲದ ಬೇಡಿಕೆ. ಬಿಸಿರೋಡಿನ ಹೃದಯಭಾಗದಲ್ಲಿರುವ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂಬುದಾಗಿ ನಾಮಕಾರಣ ಮಾಡುವಂತೆ, ದಿ. ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಸಂಘ ಪುರಸಭೆಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ರಮನಾಥ ರೈಯವರಿಗೆ ಮನವಿಯನ್ನು ಸಲ್ಲಿಸಿತು. ಪುರಸಭೆಗೆ ಬೇರೆಬೇರೆ ಹೆಸರುಗಳನ್ನು ಇರಿಸುವಂತೆ ಮನವಿಗಳು ಸಲ್ಲಿಕೆಯಾಗಿದ್ದರೂ. ೨೦೧೬ರ ಪುರಸಭೆಯ ಸಭೆಯಲ್ಲಿ ಪುರಸಭಾ ಸದಸ್ಯರು, ಅಧ್ಯಕ್ಷರು ಬಹುಮತದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂಬುದಾಗಿ ಸಭೆಯಲ್ಲಿ ಅಂಗೀಕಾರಗೊಳಿಸಿದರು. ಅ ಬಳಿಕ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರಕ್ಕೂ ಪುರ ಸಭೆಯ ನಿರ್ಣಯದ ಜೊತೆ ಮನವಿ ಮಾಡಿಲಾಗಿತ್ತು.  ಅಕ್ಟೋಬರ್ ತಿಂಗಳಲ್ಲಿ ಬಿಲ್ಲವ ಸಂಘದ ವತಿಯಿಂದಲೇ ಖರ್ಚುವೆಚ್ಚವನ್ನು ಭರಿಸಿ ವೃತ್ತ ನಿರ್ಮಾಣಗೊಳಿಸಿ ಲೋಕಾರ್ಪಣೆಗೊಳಿಸಲಾಗಿತ್ತು. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಆರಂಭವಾಗುವ ವೇಳೆಗೆ ವೃತ್ತ ತೆರವುಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ  ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಲ್ಲಿ ಮನವಿಮಾಡಿಕೊಂಡಾಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದಲೇ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಹಾಗಾಗೀ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದಲೇ ನಿರ್ಮಾಣಗೊಂಡಿರುವ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆಯಾಗಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಬ್ರಹ್ಮಶ್ರೀ ನಾರಾಯಣಗುರುಗಳು ದಾರ್ಶನಿಕರಷ್ಟೇ ಅಲ್ಲದೆ, ಪೂಜನೀಯರು. ಅವರ ಮಹತ್ವವನ್ನು ಮಹಾತ್ಮಾ ಗಾಂಧೀಜಿ, ಪೋಪ್ ಸಹಿತ ಎಲ್ಲರೂ ಉಲ್ಲೇಖಿಸಿದ್ದಾರೆ. ಹಿಂದುಳಿದ ವರ್ಗಗಳಿಗೆ ಸ್ವಾಭಿಮಾನದ ಬದುಕು ನೀಡಲು ಶ್ರಮಿಸಿದವರು. ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಘೋಷಿಸಲು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಜೀಪಮೂಡದ ಜ್ಞಾನ ಮಂದಿರದಲ್ಲಿ ಮನವಿ ಮಾಡಿದ್ದನ್ನು ನೆನಪಿಸಿದ ಅವರು, ಶಿವಗಿರಿ ಮಠದ ಶಾಖಾ ಮಠ ಬಂಟ್ವಾಳ ತಾಲೂಕಿನ ನಾವೂರಿನಲ್ಲಿ ಸ್ಥಾಪನೆಯಾಗಲಿದೆ ಎಂದರು

ಬಂಟ್ವಾಳ ನಗರ ಯೋಜನೆ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಉಪಸ್ಥಿತರಿದ್ದು, ಮಾತನಾಡಿ ವಿದ್ಯೆಯ ಮಹತ್ವವನ್ನು ಇಂದು ವಿದ್ಯಾರ್ಥಿವೇತನ ಪಡೆದವರೆಲ್ಲರೂ ಅರಿಯಬೇಕು ಎಂದರು.

ವೇದಿಕೆಯಲ್ಲಿ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಜೊತೆ ಕಾರ್ಯದರ್ಶಿ ಆನಂದ ಸಾಲಿಯಾನ್ ಶಂಭೂರು, ಕೋಶಾಧಿಕಾರಿ ಸುನೀಲ್ ಎಸ್. ಕುಂದರ್ ಮೊಡಂಕಾಪು, ಲೆಕ್ಕಪರಿಶೋಧಕ ಪ್ರಶಾಂತ್ ಕೋಟ್ಯಾನ್ ಸಂಚಯಗಿರಿ, ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ, ಯುವವಾಹಿನಿ ಅಧ್ಯಕ್ಷ ಕಿರಣ್ ಪೂಂಜರಕೋಡಿ ಉಪಸ್ಥಿತರಿದ್ದರು. ಪ್ರೇಮನಾಥ ಕರ್ಕೇರ ವಿದ್ಯಾರ್ಥಿವೇತನ ಪುರಸ್ಕೃತರ ಪಟ್ಟಿ ವಾಚಿಸಿದರು.

ಬಿಲ್ಲವ ಸಮಾಜ ಸೇವಾ ಸಂಘ ಉಪಾಧ್ಯಕ್ಷ ಜಯಪ್ತಕಾಶ್ ಜೆ.ಎಸ್. ಜಕ್ರಿಬೆಟ್ಟು ಸ್ವಾಗತಿಸಿದರು. ಇಂಜಿನಿಯರ್ ಸುಜಯ್ ಲೋಬೊ ಅವರನ್ನು ಸನ್ಮಾನಿಸಲಾಯಿತು. ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು. ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ವಂದಿಸಿದರು.

ಗುರುಮಂದಿರದಲ್ಲಿ ಬೆಳಿಗ್ಗೆ ಗಂಟೆ 7ರಿಂದ 8.30 ಭಜನಾ ಕಾರ್ಯಕ್ರಮ,: ಗುರು ಪೂಜೆ, ಮಹಾಪೂಜೆ ನಡೆಯಿತು, 11ಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ಬಳಿಕ ಸಭಾ ಕಾರ್ಯಕ್ರಮ, ವಿದ್ಯಾರ್ಥಿವೇತನ ವಿತರಣೆ  ಮಧ್ಯಾಹ್ನ ಅನ್ನಸಂತರ್ಪಣೆ. ಬಳಿಕ ದೇಯಿ ಬೈದೇತಿ ಚಲನಚಿತ್ರ ಪ್ರದರ್ಶನ. ನಡೆಯಿತು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಿ.ಸಿ.ರೋಡ್: ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ಗುರುಪೂಜೋತ್ಸವ, ವಿದ್ಯಾರ್ಥಿವೇತನ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*