ಫರಂಗಿಪೇಟೆ

ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಎಲ್.ಪಿ.ಜಿ. ಗ್ಯಾಸ್  ಲಾರಿ – ಚಾಲಕ ಪಾರು

ಬಂಟ್ವಾಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಕಡೆಗೊಳಿ ಸಮೀಪ ಎಲ್ಪಿಜಿ  ಗ್ಯಾಸ್  ಸಾಗಿಸುತ್ತಿದ್ದ  ಲಾರಿಯೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಶನಿವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ನಡೆದಿದೆ.

VNR GOLD

ಮಂಗಳೂರಿನಿಂದ ಬೆಂಗಳೂರಿನತ್ತ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಲಾರಿ ಡಿವೈಡರ್ಗೆ ಡಿಕ್ಕಿ ಹೊಡೆದ ಬಳಿಕ ಪಲ್ಟಿಯಾಗಿದೆ. ಪರಿಣಾಮ ಚಾಲಕ ಪಪ್ಪು ಚೌಹಾನ್ ಲಾರಿಯೊಳಗೆ ಸಿಲುಕಿಕೊಂಡಿದ್ದರು. ಆದರೆ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅವರು ಅಪಾಯದಿಂದ ಪಾರಾಗಿದ್ದಾರೆ.

OPTIC WORLD

ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಂಟ್ವಾಳ ಟ್ರಾಫಿಕ್ ಠಾಣೆಯ ಎಸ್ಐ ಆದರ್ಶ್ ಅವರ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ತೆರಳಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿತು.

ಜಾಹೀರಾತು
D.SHIVA BHAT JWELLERS

ನಂತರ ನಾಗೇಶ್ ಪೂಜಾರಿ ಅವರ ನೇತೃತ್ವದಲ್ಲಿ ಕ್ರೇನ್ ಸಹಾಯದಿಂದ ಪಲ್ಟಿಯಾದ ಲಾರಿಯನ್ನು ತೆರವುಗೊಳಿಸಲಾಗಿದ್ದು, ಬಳಿಕ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಯಿತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.