ಆರೋಗ್ಯವಂತ ಸಮಾಜ ಸೃಷ್ಟಿಗೆ ಆಹಾರ ಜಾಗೃತಿ ಅಗತ್ಯ: ಬಂಟ್ವಾಳದಲ್ಲಿ ಪೌಷ್ಠಿಕಾಂಶ ದಿನ ಕಾರ್ಯಕ್ರಮ ಉದ್ಘಾಟಿಸಿ ನ್ಯಾಯಾಧೀಶ ಅನಿಲ್ ಪ್ರಕಾಶ್

ಬಂಟ್ವಾಳ: ಆರೋಗ್ಯವಂತ ಸಮಾಜ ಸೃಷ್ಟಿಗೆ ಆಹಾರ ಜಾಗೃತಿಯೂ ಬೇಕ ಎಂದು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ ಸಿ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಅನಿಲ್ ಪ್ರಕಾಶ್ ಹೇಳಿದ್ದಾರೆ.

VNR GOLD

ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪೌಷ್ಟಿಕಾಂಶ ದಿನ ಕಾರ್ಯಕ್ರಮವನ್ನು ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ದೈನಂದಿನ ಜೀವನದಲ್ಲಿ ವ್ಯಾಯಾಮದ ಕೊರತೆ, ಉಪವಾಸ, ಆಹಾರದ ಗುಣಮಟ್ಟ, ಅಸುರಕ್ಷಿತ ಆಹಾರ ಇವೆಲ್ಲದರ ಕುರಿತು ಜಾಗ್ರತಿ ವಹಿಸಬೇಕು ಎಂದವರು ತಿಳಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್ ಆಹಾರ ದ ಸುರಕ್ಷತೆ ಕುರಿತು ಮಾಹಿತಿ ನೀಡಿದರು.ವಕೀಲರ ಸಂಘದ ಜತೆಕಾರ್ಯದರ್ಶಿ ಅಕ್ಷತಾ ಶೆಟ್ಟಿ ಶುಭ ಹಾರೈಸಿದರು.

ಜಾಹೀರಾತು
D.SHIVA BHAT JWELLERS

ನ್ಯಾಯವಾದಿ ಆಶಾಮಣಿ ಡಿ ರೈ ಪೌಷ್ಟಿಕ ಆಹಾರದ ಸುರಕ್ಷತೆ ಮತ್ತು ಪೋಷಣೆ ಹಾಗೂ ಕಾನೂನಾತ್ಮಕ ಹಕ್ಕುಗಳ ಕುರಿತು ಮಾಹಿತಿ ನೀಡಿದರು.ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ನೂರಾ. ಬಿ. ಮಾತನಾಡಿ, ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳಿಗೆ ಒದಗಿಸಬೇಕಾದ ಆಹಾರ ಕುರಿತು ಮಾಹಿತಿ ನೀಡಿದರು

ನಗರ ಪೊಲೀಸ್ ಠಾಣೆ ಎಸ್.ಐ. ದುರ್ಗಪ್ಪ ಮಾತನಾಡಿ, ಮಾದಕ ವ್ಯಸನ ಮುಕ್ತ ಪರಿಸರ ನಿರ್ಮಾಣಕ್ಕೆ ಶ್ರಮಿಸುವ ಕುರಿತು ವಿವರಿಸಿದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಲಿನಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಮೇಲ್ವಿಚಾರಕಿ ಮುಬೀನಾ ಬಾನು ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಯಶೋಧ ದೈವಸ್ಥಳ ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಆರೋಗ್ಯವಂತ ಸಮಾಜ ಸೃಷ್ಟಿಗೆ ಆಹಾರ ಜಾಗೃತಿ ಅಗತ್ಯ: ಬಂಟ್ವಾಳದಲ್ಲಿ ಪೌಷ್ಠಿಕಾಂಶ ದಿನ ಕಾರ್ಯಕ್ರಮ ಉದ್ಘಾಟಿಸಿ ನ್ಯಾಯಾಧೀಶ ಅನಿಲ್ ಪ್ರಕಾಶ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*