ವಿಟ್ಲ

23 ವರ್ಷ ದೇಶಸೇವೆ ಬಳಿಕ ಹುಟ್ಟೂರಿಗೆ ಮರಳಿದ ಯೋಧ, ಅದ್ಧೂರಿ ಸ್ವಾಗತ, 10 ಕಿ.ಮೀ. ವಾಹನ ಜಾಥಾ; 200ಕ್ಕೂ ಅಧಿಕ ವಾಹನ

ಭಾರತೀಯ ಸೇನೆಯಲ್ಲಿ ಸುದೀರ್ಘ 23 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಪೆರುವಾಯಿಯ ವೀರ ಯೋಧ ಚಂದ್ರಶೇಖರ ಪೂಜಾರಿ ಅವರಿಗೆ ಪೆರುವಾಯಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ, ಶ್ರೀ ಕೃಷ್ಣ ಶಾಖೆ ವತಿಯಿಂದಸ. 13ರ ಭಾನುವಾರ ಸಂಜೆ ಅದ್ಧೂರಿ ಹುಟ್ಟೂರ ಸ್ವಾಗತ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಕುದ್ದುಪದವು ದಿವ್ಯ ಶಕ್ತಿ ಯುವಕ ಮಂಡಲದಿಂದ ಪೆರುವಾಯಿಯ ಕಲ್ಲಡ್ಕದವರೆಗೆ ಸುಮಾರು 10 ಕಿ.ಮೀ. ಬೃಹತ್ ವಾಹನ ಜಾಥಾ ನಡೆಯಿತು.ಊರಿನ ಹಿರಿಯರಾದ ನಿವೃತ್ತ ಶಿಕ್ಷಕ ರಾಮಯ್ಯ ಶೆಟ್ಟಿ ವಾಹನ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾದಲ್ಲಿ 200ಕ್ಕೂ ಅಧಿಕ ವಾಹನಗಳು ಹಾಗೂ 600ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

ಜಾಥಾ ಸಾಗಿದ ಮಾರ್ಗದುದ್ದಕ್ಕೂ ಸಾವಿರಾರು ಮಂದಿ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಹರ್ಷೋದ್ಗಾರಗಳೊಂದಿಗೆ ವೀರ ಯೋಧನಿಗೆ ಆತ್ಮೀಯ ಸ್ವಾಗತ ಕೋರಿದರು. ಮಾರ್ಗಮಧ್ಯದ ಹಲವು ಕಡೆಗಳಲ್ಲಿ ಆರತಿ ಬೆಳಗಿ, ಗೌರವ ಸಮರ್ಪಿಸಿ ಯೋಧನ ಸೇವೆಯನ್ನು ಸ್ಮರಿಸಲಾಯಿತು.ಕುದ್ದುಪದವು ದಿವ್ಯ ಶಕ್ತಿ ಯುವಕ ಮಂಡಲದ ವತಿಯಿಂದಲೂ ಗೌರವಾರ್ಪಣೆಯೊಂದಿಗೆ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು.

ಜಾಹೀರಾತು

ದೇಶದ ಗಡಿಯನ್ನು ಕಾಯುವ ಹೊಣೆಗಾರಿಕೆಯಲ್ಲಿ 23 ವರ್ಷಗಳ ಅಮೂಲ್ಯ ಸೇವೆ ಸಲ್ಲಿಸಿದ ಯೋಧನಿಗೆ ತಾಯ್ನಾಡಿನ ಜನತೆ ತೋರಿದ ಪ್ರೀತಿ, ಗೌರವ ಮತ್ತು ಅಭಿಮಾನ ಕಾರ್ಯಕ್ರಮದ ಪಕ್ಷತೀತವಾಗಿ ವಿವಿಧ ವರ್ಗಗಳ ಜನರು ಭಾಗವಹಿಸಿ ವೀರ ಯೋಧನಿಗೆ ಗೌರವ ಸಲ್ಲಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಪರ ಮಹತ್ವದ ನಿರ್ಧಾರ ಕೈಗೊಳ್ಳಲಿ

Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…

7 hours ago