ವಿಟ್ಲ: ಹಿಂದೂ ಸಂಪ್ರದಾಯದಲ್ಲಿ ಪ್ರಥಮ ಪೂಜಿತ ಗಣಪತಿ. ಗಣೇಶೋತ್ಸವದಲ್ಲಿ ಜೀವನ ಪಾಠವಿದೆ. ಧಾರ್ಮಿಕ ಆಚರಣೆಗಳಲ್ಲಿ ಕುಟುಂಬ ವ್ಯವಸ್ಥೆ ಮತ್ತು ಹಿಂದೂ ಸಂಘಟನೆಯ ಶಕ್ತಿ ಅಡಗಿದೆ ಎಂದು ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ ಅರುಣ್ ಶ್ಯಾಮ್ ಹೇಳಿದರು.
ಕಂಬಳಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ 55ನೇ ವರ್ಷಾಚರಣೆಯ ಸುವರ್ಣ ಮಹೋತ್ಸವ ಸಂಭ್ರಮದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು
55 ವರ್ಷಗಳಿಂದ ಒಗ್ಗಟ್ಟಾಗಿ ಸಂಘಟನೆ ಮುನ್ನಡೆಸಿದ್ದು ಅಭಿನಂದನೀಯ. ಸನಾತನ ಸಂಸ್ಕೃತಿಯ ಉಳಿವಿಗೆ ಹಿರಿಯರ ಮಾರ್ಗದರ್ಶನದಲ್ಲಿ ಇಂತಹ ಆಚರಣೆಗಳ ಮೂಲಕ ಯುವಕರು ಶ್ರಮಿಸಬೇಕು ಎಂದರು. 55ನೇ ವರ್ಷದ ಮಹಾಗಣೇಶೋತ್ಸವ ಸಮಿತಿ ಅಧ್ಯಕ್ಷ ತಿಮ್ಮಪ್ಪ ಎಂ.ಉರಿಮಜಲು ಅಧ್ಯಕ್ಷತೆ ವಹಿಸಿದ್ದರು.
ಬೆಳಗ್ಗೆ ವಿಶೇಷ ಪೂಜೆ, ವಿವಿಧ ಆಟೋಟ ಸ್ಪರ್ಧೆಗಳು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಭಜನೆ ನಡೆಯಿತು ಸಭೆಯ ಬಳಿಕ ಮಹಾಪೂಜೆ ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…