ಮಂಗಳೂರು: ತುಳು ಭಾಷೆ ವಿಚಾರದಲ್ಲಿ ಉಡುಪಿ ಮತ್ತು ದಕ್ಣಿಣ ಕನ್ನಡ ಜಿಲ್ಲೆ ವಿಚಾರವಾಗಿ ಅನ್ವಯವಾಗುವಂತೆ ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿಸಲು ತೀರ್ಮಾನಿಸಿದ್ದೇವೆಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಂಗಳೂರು ಪ್ರಜಾಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ದಕ್ಣಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯಾಗಿದಲು ಕರಡು ಪ್ರತಿ ಸಿದ್ಧಮಾಡಿ, ಸಾರ್ವಜನಿಕ ಅಭಿಪ್ರಾಯ ರೂಪಿಸಲು ಒಂದು ತಿಂಗಳ ಸಮಯಾವಕಾಶ ನೀಡುವುದಾಗಿ ತಿಳಿಸಿದರು.
ಮಲೆನಾಡು, ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಯಾರು ಹೂಡಿಕೆ ಮಾಡುತ್ತಾರೆ, ಅವರಿಗೆ ಅನುಕೂಲವಾಗುವಂತೆ ನೀತಿ ರೂಪಿಸಲಾಗುವುದು. ಅವರ ಆರ್ಥಿಕ ಸ್ಥಿತಿಗೆ ಸಮಸ್ಯೆಯಾಗದಂತೆ ಹೂಡಿಕೆ ಆರ್ಥಿಕ ನೀತಿ, ನಗರಾಭಿವೃದ್ಧಿ ಯೋಜನೆ ರೂಪಿಸಲಾಗುವುದು. ಮೀನುಗಾರಿಕೆಗೆ ಸಂಬಂಧಿಸಿ ವಿವಿ ಸ್ಥಾಪಿಸಲಾಗುವುದು ಎಂದರು.
ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುದಾನ ನೀಡುವ ಕುರಿತು ಪ್ರಸ್ತಾಪಿಸಿದರು.
ಎಂಎಲ್ಎ ಆದ ಕೂಡಲೇ ಅಶೋಕ್ ರೈ ಅವರು ತುಳು ಭಾಷೆಗೆ ಸ್ಥಾನಮಾನ ನೀಡುವ ಕುರಿತು ಪ್ರಸ್ತಾಪಿಸಿದ್ದು, ಆಗ ಸ್ಪೀಕರ್ ಆಗಿದ್ದ ಖಾದರ್ ಅವರೂ ಒತ್ತಡ ಹಾಕಿದ್ದರು ಎಂದರು.
ನಾವು ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ರಾಜಕಾರಣ ಬದಿಗಿಟ್ಟು ಜನರಿಗೆ ಸಾಮಾಜಿಕ ನ್ಯಾಯ ನೀಡಲು ಬದ್ಧ ಎಂದರು.
ಮುಂದಿನ ದಿನಗಳಲ್ಲಿ ಕರಾವಳಿಯ ಕಾರವಾರ ಮತ್ತು ಉಡುಪಿಯಲ್ಲಿ ಸಂಪುಟ ಸಭೆ ನಡೆಸಲಿದ್ದೇವೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆ ಸಾಮಾಜಿಕವಾಗಿ ಆರ್ಥಿಕವಾಗಿ ಬೆಳೆದ ಜಿಲ್ಲೆಯಾಗಿದೆ. ನಾನು ಸಿಎಂ ಆದ ಬಳಿಕ ಮಂಗಳೂರಿನಲ್ಲಿ ಸಭೆ ನಡೆಸುತ್ತಿದ್ದೇನೆ. ಅನೇಕ ಬಾರಿ ಮಂಗಳೂರು ಕುರಿತು ಶಾಸಕರಿಗೆ ತಿಳಿಸಿದ್ದೆ. ಮಂಗಳೂರಿನಲ್ಲಿ ನಡೆದ ಇಂದಿನ ಸಭೆ, ಬೆಂಗಳೂರಿನಲ್ಲಿ ನಡೆದ ಸಭೆಗಳ ಸಹಿತ ಕಳೆದ ಮೂರು ದಿನಗಳಿಂದೀಚೆಗೆ ವಾಣಿಜ್ಯ ಸಂಘ, ಮೀನುಗಾರರ ಸಹಿತ ಹಲವರು ಸಲಹೆ, ಸೂಚನೆ ನೀಡಿದ್ದಾರೆ. ಆರ್ಥಿಕ ಸ್ಥಿತಿ ಸಹಿತ ಹಲವು ವಿಚಾರಕ್ಕೆ ಸಂಬಂಂಧಿಸಿ ಕೆಲವು ಸಲಹೆಗಳನ್ನು ನೀಡಿದ್ಸನ್ನು ಸ್ವೀಕರಿಸಲಾಗಿದೆ ಎಂದರು.
ಭಾವನಾತ್ಮಕ ವಿಚಾರಗಳ ಕುರಿತು ಮಾಧ್ಯಮಗಳ ವರದಿಗಳ ಕುರಿತು ಗಮನ ಹರಸಿದ್ದೇವೆ ಎಂದರು.