: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳ ತಾಲೂಕಿನ ಬಿಸಿರೋಡು ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 12,400 ಪ್ರಕರಣಗಳು ಯಶಸ್ವಿಯಾಗಿ ಇತ್ಯರ್ಥಗೊಂಡಿವೆ, 2.42 ಕೋಟಿ ರೂ ಅಧಿಕ ಮೊತ್ತದ ವ್ಯಾಜ್ಯ ಪರಿಹಾರವಾಗಿದೆ.
ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಅನಿಲ್ ಪ್ರಕಾಶ್ ಎಂ.ಪಿ., ಪ್ರಧಾನ ಸಿವಿಲ್ ನ್ಯಾಯಾಧೀಶ ರಾಜೇಂದ್ರ ಪ್ರಸಾದ್ ಕೆ.ಎಸ್. ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸೌಂದರ್ಯ ಎಂ. ಅವರ ಮಾರ್ಗದರ್ಶನದಲ್ಲಿ ಈ ಅದಾಲತ್ ನಡೆಯಿತು. ಲೋಕ ಅದಾಲತ್ನಲ್ಲಿ ಒಟ್ಟು 2,42,56,420 ರೂ ಮೊತ್ತದ ವ್ಯಾಜ್ಯಗಳಿಗೆ ಸೌಹಾರ್ದಯುತ ತೆರೆ ಬಿದ್ದಿದೆ
ನ್ಯಾಯಾಲಯದಲ್ಲಿ ಪರಿಗಣಿಸಲಾದ ಒಟ್ಟು 13,223 ಪ್ರಕರಣಗಳ ಪೈಕಿ ಮೂರು ವಿಭಾಗಗಳಲ್ಲಿ ಸಾಧಿಸಿದ ಪ್ರಗತಿಯ ವಿವರ ಹೀಗಿದೆ: